Breaking News

ಗದಗ : ಲವ್ವರ್ ಬ್ಲ್ಯಾಕ್ಮೇಲ್‌ಗೆ ಬೇಸತ್ತ ಶಿಕ್ಷಕಿ ನೇಣಿಗೆ ಶರಣು!!

ಕಳೆದ ಐದು ವರ್ಷಗಳಿಂದ ಸೈರಾಬಾನು, ಮೈಲೇರಿ ಎಂಬಾತನೊಂದಿಗೆ ಪ್ರೀತಿಯಲ್ಲಿದ್ದರು. ಆದರೆ, ಕೆಲ ದಿನಗಳ ಹಿಂದೆ ಇವರ ಸಂಬಂಧ ಮುರಿದುಬಿತ್ತು. ಪೋಷಕರ ಒತ್ತಾಯದ ಮೇರೆಗೆ ಸೈರಾಬಾನು ಬೇರೊಬ್ಬರೊಂದಿಗೆ ಮದುವೆಗೆ ಒಪ್ಪಿಕೊಂಡಿದ್ದರು. ಆದರೆ, ಈ ಮದುವೆ ತಯಾರಿಯನ್ನು ಕಂಡ ಮೈಲೇರಿ, ಸೈರಾಬಾನು ಅವರನ್ನು ಬೆದರಿಕೆಯಿಂದ ಕಾಡತೊಡಗಿದ. ಇಬ್ಬರ ಫೋಟೋಗಳು ಮತ್ತು ವೀಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂಬ ಆರೋಪವಿದೆ. ಈ ಬೆದರಿಕೆಯಿಂದ ಮರ್ಯಾದೆಗೆ ಭಯಪಟ್ಟ ಸೈರಾಬಾನು ಆತ್ಮಹತ್ಯೆಗೆ ಶರಣಾದರೆಂದು ಶಂಕಿಸಲಾಗಿದೆ. ಭಾನುವಾರ, ಸೈರಾಬಾನು ಅವರ ಪೋಷಕರು ಮದುವೆ ಸಾಮಗ್ರಿಗಳನ್ನು ಖರೀದಿಸಲು ಪೇಟೆಗೆ ತೆರಳಿದ್ದ ವೇಳೆ, ಡೆತ್‌ನೋಟ್ ಬರೆದಿಟ್ಟು ಅವರು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆಯ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *