ಮದುವೆಗೆ ಬಂದ ಅತಿಥಿಗಳನ್ನು ಕರೆತರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಮೃತರಲ್ಲಿ ನಾರಾಯಣಪುರ ಚಾರ್ಗಾಂವ್ ನಿವಾಸಿಗಳಾದ ಹರೇಂದ್ರ, ಯೋಗೇಂದ್ರ, ಓಂಪ್ರಕಾಶ್, ರಾಜಕಿಶೋರ್, ರಂಜೀತ್ ಮತ್ತು ಮುಖೇಶ್ ಸೇರಿದ್ದಾರೆ. ಗಾಯಗೊಂಡ ರಾಜ್ಕಿಶೋರ್ ಹಾಗೂ ಬಜರಂಗಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತರ ಗುರುತು ಪತ್ತೆಹಚ್ಚಿದ್ದು, ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

