ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣದ ರಹಸ್ಯ ಕೊನೆಗೂ ಬಯಲಾಗಿದೆ. ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ, ಪೊಲೀಸ್ ವಿಚಾರಣೆಯ ವೇಳೆ ಕೊಲೆಯ ಸಂಪೂರ್ಣ ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಗನ್ ಪಾಯಿಂಟ್, ಖಾರದ ಪುಡಿ, ಅಡುಗೆ ಎಣ್ಣೆ, ಹಗ್ಗ, ಚಾಕು ಬಳಕೆಯ ಜೊತೆಗೆ ಕೊಲೆಯ ಇಂಚಿಂಚು ವಿವರವನ್ನು ಅವರು ಬಹಿರಂಗಪಡಿಸಿದ್ದಾರೆ.ಕೊಲೆ ಮಾಡಲು ಕಾರನ ಏನು ಎಂದು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದು, ಆಸ್ತಿ ವಿಚಾರಕ್ಕೆ ಮರ್ಡರ್ ಆಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.ಕೊಲೆ ಮಾಡಿದ್ದು ನಾನೇ ಎಂದು ಒಪ್ಪಿಕೊಂಡಿದ್ದ ಪಲ್ಲವಿನ ಪೊಲೀಸರು ಅರೆಸ್ಟ್ ಮಾಡಿ ಜಡ್ಜ್ ಮುಂದೆ ಹಾಜರು ಪಡಿಸಿದ್ರು.. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಆರೋಪಿಗೆ 14 ದಿನ ನ್ಯಾಯಂಗ ಬಂಧನಕ್ಕೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

