Breaking News

ಮರ್ಡರ್ :ಹಣಕಾಸಿನ ವಿಚಾರಕ್ಕೆ ಯುವಕನ ಬರ್ಬರ ಕೊಲೆ!

ಅಮೃತಾಪುರ ಗ್ರಾಮದ ಸೇವಾಲಾಲ್ ಸಂಘದ ಚೀಟಿ ವ್ಯವಹಾರದಲ್ಲಿ ಇಬ್ಬರ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ರುದ್ರೇಶ್, ಸಂಜುನಾಯ್ಕನ ತಲೆ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡು ರಕ್ತಸ್ರಾವದಿಂದ ಯುವಕ ಸಾವಿಗೀಡಾಗಿದ್ದಾನೆ.ಸಂಜುನಾಯ್ಕ ಮೃತ ದುರ್ದೈವಿ. ರುದ್ರೇಶ್ ನಾಯ್ಕ ಹತ್ಯೆಗೈದ ಆರೋಪಿಯಾಗಿದ್ದಾನೆ. ತರೀಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿ ರುದ್ರೇಶ್ ನಾಯ್ಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *