ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ.
ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೇ. ಭಯೋತ್ಪಾದಕರ ಈ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರವಾಗಿದೆ. ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆ ರವಾನಿಸಲಾಗಿದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇವೇ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

