ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಗುಂಡಿನ ಚಕಮಕಿಯ ನಂತರ ಸೇನೆಯು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.. ಈ ಕಾರ್ಯಾಚರಣೆಯು ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಯಶಸ್ವಿಯಾಗಿ ವಿಫಲಗೊಳಿಸಿತು.ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಸ್ಥಳೀಯ ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ ಈ ಹತ್ಯಾಕಾಂಡದ ಹೊಣೆ ಹೊತ್ತಿದೆ.ಭಯೋತ್ಪಾದಕರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಯುದ್ಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

