ಅರುಣ್ ಅವರು ಸಂಬಂಧಿ ಸುಧಾಕರ ಅವರನ್ನು ಸಹ ಸವಾರರನ್ನಾಗಿ ಕರೆದುಕೊಂಡು ಬೀಜಾಡಿಗೆ ಬಂದು, ವಾಪಸ್ ಕೋಟೇಶ್ವರದ ಕಡೆಗೆ ಸಂಚರಿಸುತ್ತಿದ್ದ ವೇಳೆ ಕೋಟೇಶ್ವರದ ನಾಗಬನ ಬಳಿಯ ರಸ್ತೆಯಲ್ಲಿ ನಿಯಂತ್ರಣ ತಪ್ಪಿ, ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ. ಪರಿಣಾಮ ಎದೆ, ಕಾಲಿಗೆ ಗಂಭೀರ ಗಾಯಗೊಂಡ ಅರುಣ್ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬೆಳಗ್ಗೆ 8.45 ರ ಸುಮಾರಿಗೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು. ಸಹ ಸವಾರ ಸುಧಾಕರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

