ಹುಬ್ಬಳ್ಳಿ ತಾಲೂಕಿನ ಗಾಮನಗಟ್ಟಿಯ ಕೃಷಿ ಹೊಂಡದಲ್ಲಿ ಬುಧವಾರ ಬಾಲಕರಿಬ್ಬರು ಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಗಾಮನಗಟ್ಟಿ ಮೇದಾರ ಓನಿಯ ಜೀವನ್ ಕುಮಾರ್, ಪವನ್ ತಡಸಿನಕೊಪ್ಪ ಮೃತರು ಎಂದು ಪತ್ತೆ ಹಚ್ಚಲಾಗಿದೆ. ಕೃಷಿ ಹೊಂಡಕ್ಕೆ ಸ್ನೇಹಿತರೊಂದಿಗೆ ಈಜಲು ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಜೊತೆಯಲ್ಲಿ ಇನ್ನೊಬ್ಬ ಬಾಲಕ ಆದ ಘಟನೆ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಬಾಲಕರ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಶವಗಳನ್ನು ನಗರದ ಕೆಎಂಸಿಗೆ ರವಾನಿಸಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

