Breaking News
Oplus_131072

ಹುಬ್ಬಳ್ಳಿ : ಕೃಷಿ ಹೊಂಡದಲ್ಲಿ ಬಾಲಕರಿಬ್ಬರ ಸಾವು!!

ಹುಬ್ಬಳ್ಳಿ ತಾಲೂಕಿನ ಗಾಮನಗಟ್ಟಿಯ ಕೃಷಿ ಹೊಂಡದಲ್ಲಿ ಬುಧವಾರ ಬಾಲಕರಿಬ್ಬರು ಈಜಲು ಹೋಗಿ ಮುಳುಗಿ ಮೃತಪಟ್ಟಿದ್ದಾರೆ. ಗಾಮನಗಟ್ಟಿ ಮೇದಾರ ಓನಿಯ ಜೀವನ್ ಕುಮಾರ್, ಪವನ್ ತಡಸಿನಕೊಪ್ಪ ಮೃತರು ಎಂದು ಪತ್ತೆ ಹಚ್ಚಲಾಗಿದೆ. ಕೃಷಿ ಹೊಂಡಕ್ಕೆ ಸ್ನೇಹಿತರೊಂದಿಗೆ ಈಜಲು ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಜೊತೆಯಲ್ಲಿ ಇನ್ನೊಬ್ಬ ಬಾಲಕ ಆದ ಘಟನೆ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಬಾಲಕರ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಶವಗಳನ್ನು ನಗರದ ಕೆಎಂಸಿಗೆ ರವಾನಿಸಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *