ಗೋಡಿಹಾಳ ಗ್ರಾಮದಿಂದ ಹರಿಹರಕ್ಕೆ ನಾಮಕರಣ ಶಾಸ್ತ್ರಕ್ಕೆ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಟ್ರೇಲರ್ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಾಣೆಬೆನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ಗೋಡಿಹಾಳ ಗ್ರಾಮದ ಅಶೋಕ್ ಸಿದ್ದಪ್ಪ ಮಾಗನೂರ (56) ಹಾಗೂ ಜಗದೀಶ್ ಸಿದ್ದಪ್ಪ (50) ಎಂದು ಗುರುತಿಸಲಾಗಿದೆ.ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

