Breaking News

ತಂದೆ-ತಾಯಿಯನ್ನು ಟ್ರ್ಯಾಕ್ಟರ್​ ಹಾಯಿಸಿ ಕೊಂದ ಮಗ!!

ಭೂಮಿಯನ್ನು ತಮ್ಮ ಮಗಳು ರಾಧಾಗೆ ನೀಡಿದರು. ಇದನ್ನು ತಿಳಿದ ಮಗ ರಾಜಶೇಖರ್, ನೋಂದಾಯಿಸಿದ್ದ ಭೂಮಿಯನ್ನು ಹಿಂದಿರುಗಿಸುವಂತೆ ರಾಧಾ ಜೊತೆ ಆಗಾಗ ಜಗಳವಾಡುತ್ತಿದ್ದ. ಆದಾಗ್ಯೂ, ಅಪ್ಪಲನಾಯ್ಡು ಮಾತ್ರ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ಇದೇ ಸಂದರ್ಭದಲ್ಲಿ, ಸಾಲದ ಹೊರೆಯನ್ನು ಹೊರಲು ಸಾಧ್ಯವಾಗದೆ, ತಂದೆ ಅಪ್ಪಲನಾಯ್ಡು ಬಳಿಯಿದ್ದ ಭೂಮಿಯನ್ನು ಮಾರಾಟ ಮಾಡಲು ರಾಜಶೇಖರ್​ ನಿರ್ಧರಿಸಿದ. ಹೀಗಾಗಿ, ಜೆಸಿಬಿ ಮತ್ತು ಟ್ರ್ಯಾಕ್ಟರ್ ಸಹಾಯದಿಂದ ಜಮೀನಿನಲ್ಲಿ ಕೆಲಸ ಮಾಡಿ ಭೂಮಿಯನ್ನು ಸಮತಟ್ಟು ಮಾಡುತ್ತಿದ್ದ.ಮಗಳು ರಾಧಾಗೆ ನೀಡಿದ್ದ ಜಮೀನನ್ನು ಸಮತಟ್ಟು ಮಾಡದಂತೆ ತಡೆದರು. ರಾಜಶೇಖರ್, ಟ್ರ್ಯಾಕ್ಟರ್​ನಿಂದ ಪೋಷಕರ ಮೇಲೆ ಡಿಕ್ಕಿ ಹೊಡೆದು, ಅತ್ಯಂತ ಕ್ರೂರವಾಗಿ ಕೊಂದಿದ್ದಾನೆ.ಪೊಲೀಸರು ಸ್ಥಳಕ್ಕೆ ತಲುಪಿ ಪ್ರಕರಣ ದಾಖಲಿಸಿಕೊಂಡು ಆರೋಪಿ ರಾಜಶೇಖರ್​ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಪ್ಪಲನಾಯ್ಡು ದಂಪತಿಯ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *