ಕಲಬುರಗಿಯಲ್ಲಿ ನಡೆದಿದ್ದ ಎಟಿಎಂ ದರೋಡೆ ಪ್ರಕರಣ ಕೇವಲ 15 ದಿನದಲ್ಲಿ ಭೇದಿಸಿರುವ ಇಲ್ಲಿನ ಪೊಲೀಸರು, ಶನಿವಾರ ಬೆಳ್ಳಂ ಬೆಳಗ್ಗೆ ಇಲ್ಲಿನ ಬೇಲೂರು ಕ್ರಾಸ್ ಬಳಿ ಹರಿಯಾಣ ಮೂಲದ ಎಟಿಎಂ ದರೋಡೆಕೋರ ಗ್ಯಾಂಗ್ ಮೇಲೆ ಗುಂಡಿನ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.ಬಂಧಿತರನ್ನು ಹರಿಯಾಣದ ಶಿರೋಳಿಯ ತಸ್ಲೀಂ (28), ತವಾಣೆಯ ಶರೀಫ್ (20), ಶಿಕಾಂಪೂರದ ಶಾಹೀದ್ (27) ಹಾಗೂ ಕಾರು ಚಾಲಕ ಹೈದ್ರಾಬಾದ್ನ ಅಮೀರ್ (25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ಗಳಾದ ಮಂಜು, ಫಿರೋಜ್, ರಾಜಕುಮಾರ್ ಅವರಿಗೂ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳನ್ನು ಕಲಬುರಗಿ ಜಿಮ್ಸ್ಗೆ ದಾಖಲಿಸಲಾಗಿದೆ. ದರೋಡೆಕೋರರನ್ನು ಬಂಧಿಸಿದ ತಂಡಕ್ಕೆ ಕಮೀಶ್ನರ್ ಶರಣಪ್ಪ ಅವರು ₹25 ಸಾವಿರ ನಗದು ಬಹುಮಾನ ಘೋಷಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

