ಕುಮಾರಸ್ವಾಮಿ ಲೇಔಟ್ನ ಜೆಹೆಚ್ ಬಿಸಿ ಲೇಔಟ್ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.ನಂತರ ಪ್ರಕರಣ ದಾಖಲಿಸಿಕೊಂಡಿದ್ದ ಕೆಎಸ್ ಲೇಔಟ್ ಪೊಲೀರು ಮೂವರು ಆರೋಪಿಗಳಾದ ಭಾನುಪ್ರಸಾದ್, ಶರತ್, ಅಮೃತ್ ಕುಮಾರ್ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸದ್ಯ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.ದುಷ್ಕೃತ್ಯ ಮೆರೆದ ಆಟೊ ಚಾಲಕನ ಮೇಲೆ ಪೋಲಿಸರು ಕ್ರಮ ಕೈಗೊಳ್ಳಬೇಕೆಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

