ಒಟ್ಟಾವಾದಲ್ಲಿ ಭಾರತದ ವಿದ್ಯಾರ್ಥಿನಿ ವಂಶಿಕಾ ಸಾವಿನ ಸುದ್ದಿ ತಿಳಿದು ನಮಗೆ ತುಂಬಾ ದುಃಖವಾಗಿದೆ. ಈ ವಿಷಯವನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಮತ್ತು ಸ್ಥಳೀಯ ಪೊಲೀಸರ ಪ್ರಕಾರ ಕಾರಣ ತನಿಖೆಯಲ್ಲಿದೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ನಾವು ದುಃಖಿತರ ಸಂಬಂಧಿಕರು ಮತ್ತು ಸ್ಥಳೀಯ ಸಮುದಾಯ ಸಂಘಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ’ ಎಂದು ಭಾರತೀಯ ಹೈಕಮಿಷನ್ ತಿಳಿಸಿತ್ತು. ನಂತರ ಕೂಡಲೇ ತನಿಖೆ ಪ್ರಾರಂಭಿಸಿದ ಪೊಲೀಸರು ಸತತ ನಾಲ್ಕು ದಿನಗಳ ಕಾಲ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ವಂಶಿಕಾ ಮೃತದೇಹ ಕಡಲತೀರದಲ್ಲಿ ಪತ್ತೆಯಾಗಿದೆ. ಸಾವಿಗೆ ಸರಿಯಾದ ಕಾರಣ ತಿಳಿದು ಬಂದಿಲ್ಲವಾದರೂ, ವಂಶಿಕಾಳನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

