Breaking News

ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​!!

ಚಲಿಸುತ್ತಿದ್ದ NWKRTC ಬಸ್​ಗೆ ಬೈಕ್ ಸವಾರ ಅಡ್ಡ ಬಂದಿದ್ದರು. ಆಗ, ಬಸ್​ ಚಾಲಕ ನಿಧಾನವಾಗಿ ಹೋಗಪ್ಪ ಅಂತ ಬುದ್ದಿವಾದ ಹೇಳಿದ್ದಾರೆ. ಇಷ್ಟಕ್ಕೇ NWKRTC ಬಸ್ ಚಾಲಕನ ಜೊತೆ ಬೈಕ್​ ಸವಾರ ವಾಗ್ವಾದಕ್ಕೆ ಇಳಿದಿದ್ದಾನೆ. ಚಾಲಕನಿಗೆ ನಿಂದಿಸಿ, ಬಳಿಕ ತನ್ನ ತಂದೆಗೆ ಕರೆ ಮಾಡಿದ್ದಾನೆ. ಜಗದಾಳ ಬಳಿ ಬೊಲೆರೊ ವಾಹನದಲ್ಲಿ ಜನರನ್ನು ಕರೆತಂದು ಚಾಲಕ ಮತ್ತು ನಿರ್ವಾಹಕರ ಮೇಲೆ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ. ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ ನಡೆದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *