Breaking News
Oplus_131072

ಬೆಂಗಳೂರು: ಜ್ಯುವೆಲ್ಲರಿ ಶಾಪ್ ತೆರೆಯಲು ತೆರಳುತಿದ್ದ ಸಿಬ್ಬಂದಿ ಅಪಘಾತದಲ್ಲಿ ಸಾವು!

ಇಂದು ಜ್ಯುವೆಲ್ಲರಿ ಶಾಪ್ ತೆರೆಯಲು ತೆರಳುತಿದ್ದ ಸಿಬ್ಬಂದಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.ಶ್ರೀರಾಮ್ ಪುರದಿಂದ ನ್ಯೂಬಿಎಲ್ ಕಡೆಗೆ ತೆರಳುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ. ಮೃತ ಸಿಬ್ಬಂದಿಯನ್ನು ಹರ್ಷ ಎಂದು ತಿಳಿದುಬಂದಿದ್ದು, ಸಚಿನ ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿವೆ. ಮೃತ ಹಾಗೂ ಗಾಯಾಳು ಇಬ್ಬರು ಶ್ರೀರಾಮ ಪುರದ ನಿವಾಸಿಗಳಾಗಿದ್ದು, ಅಕ್ಷಯ ತೃತೀಯ ಹಿನ್ನಲೆ ನಿಗದಿತ ಸಮಯಕ್ಕಿಂತ ಬೇಗ ಶಾಪ್ ತೆರೆಯಲು ತೆರಳುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸದಾಶಿವನಗರ ಸಂಚಾರ ಪೋಲಿಸರು ಭೇಟಿ ಮಾಡಿದ್ದು, ಮರಣೋತ್ತರ ಪರೀಕ್ಷೆಗೆಂದು ಹರ್ಷ ಮೃತದೇಹ ಎಮ್‌ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಚಿನ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *