Breaking News

ಮಂಗಳೂru: ಕೇರಳ ಮೂಲದ ಮುಸ್ಲಿಂ ಯುವಕನ ಹತ್ಯೆ!!

ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಲ್ಲಿ ನಿವಾಸಿಯಾಗಿದ್ದ ಯುವಕ ಅಶ್ರಫ್‌ನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಂಗಳೂರಿನ ವೆನ್‌ಲಾಕ್ ಶವಾಗಾರದಲ್ಲಿದ್ದ ಅಶ್ರಫ್‌ನ ಮೃತದೇಹವನ್ನು ಅವನ ಕುಟುಂಬಸ್ಥರು ಗುರುತಿಸಿ, ಪೊಲೀಸರಿಂದ ಸ್ವೀಕರಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಗಮನಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸಚಿವ ದಿನೇಶ್ ಗುಂಡೂರಾವ್ ಈ ಹಿಂದೆಯೇ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಈಗ, ವಿಶೇಷ ತನಿಖಾ ತಂಡದ ರಚನೆಗೆ ಒತ್ತಾಯವಿರುವುದರಿಂದ, ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆಯಲು ಉನ್ನತ ಮಟ್ಟದ ತನಿಖೆ ನಡೆಯುವ ಸಾಧ್ಯತೆಯಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *