ಬಂಗಾರಪೇಟೆ ಮತ್ತು ಟೇಕಲ್ ಮುಖ್ಯ ರಸ್ತೆಯ ಗೊರವನಹಳ್ಳಿ ಬಳಿ ಶುಕ್ರವಾರ ಟಿಪ್ಪರ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.ಟಿಪ್ಪರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬೂದಿಕೋಟೆ ಪೋಲಿಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಸುನೀಲ್ ಐರೋಡಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹನುಮಂತ (55) ಮತ್ತು ಹುಲಿಬೆಲೆಯ ಎಚ್.ವಿ.ನಾಗರಾಜ (35) ಮೃತರು.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

