ತಾಲ್ಲೂಕಿನ ಸಾತನೂರು ಹೋಬಳಿ ಬೊಮ್ಮನಹಳ್ಳಿಯಲ್ಲಿ ನಾಯಿಯೊಂದು ಏಳು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಮಂಗಳವಾರ ನಡೆದಿದೆ.ಗ್ರಾಮದ ರತ್ನಮ್ಮ, ನಕ್ಷತ್ರ, ಉಮಾ, ಚಿರಾಗ್, ರಾಚಯ್ಯ, ವೆಂಕಟಗಿರಿ ಮತ್ತು ಗೊಲ್ಲರದೊಡ್ಡಿ ಮಹಿಳೆಯೊಬ್ಬರು ನಾಯಿ ದಾಳಿಯಲ್ಲಿ ಗಾಯಗೊಂಡಿದ್ದಾರೆ.ನಗರ ಪ್ರದೇಶದಂತೆ ಗ್ರಾಮೀಣ ಪ್ರದೇಶದಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಗ್ರಾಮ ಪಂಚಾಯಿತಿಯಿಂದ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಬೇಕೆಂದು ಗ್ರಾ.ಪಂ ಸದಸ್ಯ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.ನಾಯಿಯಿಂದ ಕಚ್ಚಿಸಿಕೊಂಡವರು ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

