ರೌಡಿಶೀಟರ್ ಸಂತೋಷ್ ಕುಮಾರ್ ಹತ್ಯೆ ಪ್ರಕರಣದ 10 ಮಂದಿ ಆರೋಪಿಗಳು ಹೊಳಲ್ಕೆರೆ ಠಾಣೆ ಪೊಲೀಸರ ಎದುರು ಶರಣಾಗಿದ್ದಾರೆ. ಪ್ರಕರಣ ಸಂಬಂಧ 12 ಜನರ ವಿರುದ್ಧ ದಾವಣಗೆರೆಯ ವಿದ್ಯಾನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮೃತ ಸಂತೋಷ್ ಕುಮಾರ್ ಪತ್ನಿ ಶ್ರುತಿ ದೂರಿನ ಮೇರೆಗೆ ಆರೋಪಿಗಳಾದ ಕಾರ್ತಿಕ್, ಚವಳಿ ಸಂತು, ನವೀನ್, ಗುಂಡಪ್, ಬಸವರಾಜ್, ಹನುಮಂತಪ್ಪ, ಗಿಡ್ಡ ವಿಜಿ, ಚಿಕ್ಕಮ್ಮನಹಳ್ಳಿ ಶಿವು, ಕಡ್ಡಿ ರಾಘು, ಪ್ರಶಾಂತ್ ಮತ್ತು ನಿಟ್ಟುವಳ್ಳಿಯ ಗಣಿ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.ಕೊಲೆಯಾದ ರೌಡಿಶೀಟರ್ ಕಣುಮ ಸಂತೋಷ್ ಕುಮಾರ್ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರ ಬಳಿಯ ಮಾರಿ ಕಣವಿ ನಿವಾಸಿಯಾಗಿದ್ದನು. ಸಂತೋಷ ಕುಮಾರ್ ತಾಯಿಯ ತವರು ದಾವಣಗೆರೆಯಾದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ನೆಲೆಸಿದ್ದರು. ಕಣುಮ ಬೆಳೆಯುವುದರ ಜೊತೆಗೆ ಸೊಪ್ಪು ಮಾರುತ್ತಿದ್ದನು. ನಂತರ, ರೌಡಿಸಂಗೆ ಇಳಿದ ಕಣುಮ ಸಂತೋಷ ಕುಮಾರ್ ದಾವಣಗೆರೆ ಜಿಲ್ಲೆಯಲ್ಲಿನ ರೌಡಿಶೀಟರ್ ಗಳಾದ ಬುಳ್ಳ್ ನಾಗಾ, ಜೈಮ್ ಯೋಗಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದನು.
bigtvnews | Hubli Dharwad News | Kannada News | Karnataka News Hubli News | News In Hubli | Local news

