Breaking News

ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಆನೇಕಲ್​​​ನ ಅರಣ್ಯ ಪ್ರದೇಶದ ಅಂಚಿನಲ್ಲಿ ವ್ಯಕ್ತಿಯೋರ್ವನ ಶವ ಅರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿದ್ದ ಸಿಕ್ಕ ಒಂದು ದ್ವಿಚಕ್ರ ವಾಹನದ ವಿವರಗಳಿಂದ ಮೃತನು ಜೆಪಿ ನಗರದ ನಿವಾಸಿ ಮಧುಸೂದನ್ (27) ಎಂದು ಗುರುತಿಸಿದ್ದಾರೆ.ಬೆಳಗ್ಗೆ ದನಗಾಹಿಯೋರ್ವನು ಬನ್ನೇರುಘಟ್ಟ ಅರಣ್ಯದ ಶಿಲೀಂದ್ರದೊಡ್ಡಿಯಲ್ಲಿ ಶವ ಕಂಡಾಗ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಭೂತನಹಳ್ಳಿ ಸರ್ವೆ ನಂಬರ್ 67ರ ಸ್ಥಳದಲ್ಲಿ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಮೃತ ಮಧೂಸೂದನ್ ಆನ್ಲೈನ್ ಟ್ರೇಡಿಂಗ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *