ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಸಂಭವಿಸಿದೆ.ತಾಯಿ ಮಲಗಿದ ಜಾಗದಲ್ಲಿ ಜಯರಾಂ ಅವರು ಬರೆದಿರುವ ನಾಲ್ಕು ಪುಟ ಗಳ ಪತ್ರ ಲಭಿಸಿದ್ದು ಅದರಲ್ಲಿ ಸಾಲದ ಸಮಸ್ಯೆ, ತನ್ನ ಅನಾರೋಗ್ಯದ ಕಾರಣ ದಿಂದ ನಾವು ನಿದ್ರೆ ಮಾತ್ರೆ ಸೇವಿಸಿರುತ್ತೇವೆ. ನಮ್ಮನ್ನು ಬದುಕಿಸುವ ಪ್ರಯತ್ನ ಮಾಡಬೇಡಿ ಎಂದು ಬರೆಯಲಾಗಿದೆ. ತಾಯಿ ಕಳೆದ ನಾಲ್ಕು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಮಲಗಿದಲ್ಲೇ ಇದ್ದು ಅವರ ಆರೈಕೆಯನ್ನು ಮಗನೇ ಮಾಡುತ್ತಿದ್ದರು.ಆದ್ದರಿಂದ ನಾನು ಸತ್ತರೆ ಅಮ್ಮನನ್ನು ನೋಡಿಕೊಳ್ಳುವವರು ಯಾರು ಎಂಬ ಕಾರಣಕ್ಕೆ ನಾವಿಬ್ಬರೂ ಜತೆಯಾಗಿ ಸಾಯುತ್ತಿದ್ದೇವೆ ಎಂದು ಬರೆದಿದ್ದಾರೆ ಎನ್ನಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

