ನಾಗಸಮುದ್ರ ಗ್ರಾಮದ ಯುವತಿಯೊಬ್ಬರು ಪ್ರೀತಿಸಿದ ಯುವಕ ಮದುವೆಯಾಗಲು ನಿರಾಕರಿಸಿದ ಎಂಬ ಕಾರಣಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಾಂಪುರ ಗ್ರಾಮದ ಭಾರ್ಗವ ರೆಡ್ಡಿ ಪರಿಚಯವಾಗಿತ್ತು. ನಂತರ ಇಬ್ಬರೂ ಪ್ರೀತಿಸುತ್ತಿದ್ದರು. ಬಳಿಕ ಭಾರ್ಗವರೆಡ್ಡಿ, ‘ನಿಮ್ಮದು ನಮ್ಮದು ಬೇರೆ ಬೇರೆ ಜಾತಿ. ಮದುವೆಯಾದಲ್ಲಿ ಸಮಸ್ಯೆಯಾಗುತ್ತದೆ’ ಎಂದು ನಿರಾಕರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪಾಲಕರು ದೂರಿನಲ್ಲಿ ತಿಳಿಸಿದ್ದಾರೆ.ಭಾರ್ಗವರೆಡ್ಡಿ ಮತ್ತು ಪಾಲಕರ ವಿರುದ್ಧ ಕ್ರಮ ಕೊಳ್ಳಬೇಕು ಎಂದು ಆಗ್ರಹಿಸಿ ಅಂಜಲಿ ಸಂಬಂಧಿಕರು ಕೆಲಕಾಲ ರಾಂಪುರ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಸ್ಥಳಕ್ಕೆ ಬಂದು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.ಈ ಸಂಬಂಧ ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

