Breaking News

ಹಾಸನ :ತಂದೆ ಎದುರೇ ಮಗಳ ಅಪಹರಣ, ಮಗಳ ರಕ್ಷಣೆಗೆ ಕಾರಿನ ಕಿಟಕಿಗೆ ಜೋತುಬಿದ್ದ ಗಾಯಗೊಂಡ ತಂದೆ!

ಅರೇಹಳ್ಳಿಯಲ್ಲಿ ಪ್ರೇಮ ವಿವಾಹದ ಹಿನ್ನೆಲೆಯಲ್ಲಿ ಭೀಕರ ಘಟನೆಯೊಂದು ನಡೆದಿದೆ. ಚನ್ನರಾಯಪಟ್ಟಣದ ಯುವಕ ಪ್ರಜ್ವಲ್ ತನ್ನ ಪತ್ನಿ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವಾಗ, ಯುವತಿಯ ತಂದೆ ಆಕೆಯನ್ನು ರಕ್ಷಿಸಲು ಪ್ರಯತ್ನಿಸಿ ಚಲಿಸುತ್ತಿದ್ದ ಕಾರಿನ ಬಾಗಿಲಿಗೆ ನೇತಾಡಿದ್ದಾರೆ.ಘಟನೆಯ ಬಗ್ಗೆ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಜ್ವಲ್ ಮತ್ತು ಪ್ರಸ್ಟಲ್ ಚನ್ನರಾಯಪಟ್ಟಣ ಪೊಲೀಸರ ಎದುರು ಹಾಜರಾಗಿದ್ದಾರೆ. ಪೊಲೀಸರು ಈ ಪ್ರಕರಣದಲ್ಲಿ ತನಿಖೆ ಆರಂಭಿಸಿದ್ದು, ಘಟನೆಯ ಸಂಪೂರ್ಣ ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ. ಪ್ರಸ್ಟಲ್‌ನ ತಂದೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

Share News

About BigTv News

Check Also

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: 9 ಅಪರಾಧಿಗಳಿಗೆ ಜೀವವಧಿ ಶಿಕ್ಷೆ!

ಆರು ವರ್ಷಗಳ ಹಿಂದೆ ತಮಿಳುನಾಡಿನ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಮತ್ತು ಸುಲಿಗೆ ಪ್ರಕರಣದಲ್ಲಿ ಬಂಧಿತರಾಗಿದ್ದ 9 ಆರೋಪಿಗಳನ್ನು ಅಪರಾಧಿಗಳು ಎಂದು …

Leave a Reply

Your email address will not be published. Required fields are marked *

You cannot copy content of this page