ದುಷ್ಟಶಕ್ತಿಯನ್ನು ಓಡಿಸುತ್ತೇನೆ ಎಂದು ಜ್ಯೋತಿಷಿ ಬೆಂಗಳೂರಿನ ವಿಭೂತಿಪುರದ ನಿವಾಸಿಯಾಗಿರುವ 33 ವರ್ಷದ ಮಹಿಳೆಯಿಂದ ಐದು ಲಕ್ಷ ರೂ. ಪಡೆದು ವಂಚಿಸಿದ್ದಾನೆ. ವಂಚಕನ ವಿರುದ್ಧ ವಂಚನೆಗೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.ಜ್ಯೋತಿಷಿ ಮೊದಲಿಗೆ ನಿಂಬೆ ಹಣ್ಣುಗಳನ್ನು ಕತ್ತರಿಸಿ, ಧೂಪ ಹಚ್ಚಿದ್ದಾನೆ. ನಂತರ ಮಹಿಳೆಯ ಮುಖಕ್ಕೆ ಬೂದಿ ಎರಚಿದ್ದಾನೆ. ನಂತರ, ಮಹಿಳೆಗೆ ನವಿಲು ಗರಿಗಳಿಂದ ಹೊಡೆದು, ಅವರ ಕೂದಲನ್ನು ಹಿಡಿದು “ಆತ್ಮ ದೂರ ಹೋಗು” ಎಂದು ಕಿರಿಚಿದ್ದಾನೆ. ಪೂಜೆಗಳೆಲ್ಲ ಮುಗಿದ ನಂತರ ದುಷ್ಟಶಕ್ತಿಗಳು ನಿಮ್ಮನ್ನು ಬಿಟ್ಟು ಹೋದವು ಎಂದಿದ್ದಾನೆ.ಆದರೆ, ಮಹಿಳೆಯ ಆರೋಗ್ಯದಲ್ಲಿ ಮಾತ್ರ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆ ಹಣ ಮರುಪಾವತಿಸುವಂತೆ ಜ್ಯೋತಿಷಿಗೆ ಸಂಪರ್ಕಿಸಲು ಯತ್ನಿಸಿದರು. ಆದರೆ, ಜ್ಯೋತಿಷಿ ಮಾತ್ರ ಮಹಿಳೆಯ ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಂಡಿದ್ದಾನೆ. ನಂತರ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

