ಅಥಣಿ ಪಟ್ಟಣದ ಹೊರವಲಯದ ಖಾಲಿ ನಿವೇಶನದಲ್ಲಿ ಮೇ 01 ರಂದು ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಬಾಲಕನ ಶವ ಸಿಕ್ಕಿತ್ತು. ಅನಾಥ ಶವ ಎಂದು ಪೊಲೀಸರು ಶವ ಸಂಸ್ಕಾರ ಮಾಡಿದ್ದರು. ಶವ ಸಂಸ್ಕಾರ ನಡೆದ ಎರಡು ದಿನಗಳ ಬಳಿಕ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಬಾಲಕನ ಗುರುತು ಪತ್ತೆಯಾಗಿದೆ.ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಬಾಲಕನದ್ದು ಸಹಜ ಸಾವಲ್ಲ, ಕೊಲೆ ಎಂದು ತಿಳಿದಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಬ್ದುಲ್ ಬಾರಿ ಮುಲ್ಲಾ (36), ಜೂಬೇರ ಅಹಮದ್ ಮೌಲ್ವಿ(34), ಬಿಲಾಲ್ ಅಹಮದ್ ಮೌಲ್ವಿ (25), ಹಜರತ್ ಬಿಲಾಲ್ ನಾಲಬಂದ್(27), ಮಹೇಶ ಕಾಳೆ (36) ಬಂಧಿತರು.
bigtvnews | Hubli Dharwad News | Kannada News | Karnataka News Hubli News | News In Hubli | Local news

