ಮಾಗನೂರು ಗ್ರಾಮದ ಹೊರವಲಯದಲ್ಲಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಗ್ರಾಮಾಂತರ ಪೊಲೀಸರು 9 ಮಂದಿಯನ್ನು ಬಂಧಿಸಿ ಬಿಡುಗಡೆ ಮಾಡಿದ್ದಾರೆ.ಗ್ರಾಮದ ಬಸವನಪುರ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿ ಮಂಗಳವಾರ ಸಂಜೆ ಗ್ರಾಮಾಂತರ ಪಿಎಸ್ಐ ಶ್ರವಣ ದಾಸರಡ್ಡಿ ನೇತೃತ್ವದಲ್ಲಿ ದಾಳಿ ಮಾಡಿದ ಪೊಲೀಸರು ಪಣಕ್ಕಿಟ್ಟಿದ್ದ ₹3500 ಅನ್ನು ವಶ ಪಡಿಸಿಕೊಂಡಿದ್ದಾರೆ.ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

