Breaking News

ಕುಡಿಯುವ ನೀರಿಗೆ ಹಾಹಾಕಾರ: ಹುಬ್ಬಳ್ಳಿಯಲ್ಲಿ ಖಾಲಿ ಕೊಡ ಹಿಡಿದು ನಾರಿಯರ ಪ್ರತಿಭಟನೆ!

ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ರಾಮಲಿಂಗ ನಗರ, ರವಿ ನಗರ ಸೇರಿದಂತೆ ಇತರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಹೀಗಾಗಿ ಈ ಬಡಾವಣೆಗಳ ನಿವಾಸಿಗಳು ರೋಸಿ ಹೋಗಿದ್ದಾರೆ. ಕಳೆದ 12 ದಿನಗಳಿಂದ ನೀರು ಸರಬರಾಜು ಮಾಡದ ವ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ನಾರಿಯರು ಬೀದಿಗಿಳಿದಿದ್ದಾರೆ.ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ರಾಮಣ್ಣ ಬಡಿಗೇರ ಪ್ರತಿನಿಧಿಸುವ ವಾರ್ಡ್ ನಲ್ಲಿಯೇ ನೀರಿಗೆ ಬರ ಎದುರಾಗಿದೆ. ಚುನಾವಣೆ ಬಂದಾಗ ಭರವಸೆ ನೀಡುವ ಜನಪ್ರತಿನಿಧಿಗಳು ಎಲ್ಲಿ ಎಂದು ನಿವಾಸಿಗಳು ಕಿಡಿಕಾರಿದ್ದಾರೆ.ಕುಡಿಯುವ ನೀರಿಗಾಗಿ ಆಗ್ರಹಿಸಿ ಸ್ಥಳೀಯರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು. ನೆಹರು ನಗರ ವಾಟರ್ ಟ್ಯಾಂಕ್, ಗೋಕುಲ್ ರೋಡ್ ಮುಂದೆ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದ ಮಹಿಳೆಯರು, ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *