Breaking News

ಒಡಿಶಾದ ಪುರಿ ಜಗನ್ನಾಥ ದೇವಾಲಯಕ್ಕೆ ಹೊರಟಿದ್ದ ಬೆಂಗಳೂರಿನ 20ಪ್ರವಾಸಿಗರು ಅಸ್ವಸ್ಥ!

ಬುಧವಾರ ರಾತ್ರಿ ಊಟ ಮುಗಿಸಿಕೊಂಡು ಬಸ್‌ನಲ್ಲಿ ಪುರಿಗೆ ತೆರಳುತ್ತಿದ್ದಾರೆ ಬಾಲೇಶ್ವರ ಜಿಲ್ಲೆಯ ಸೊರೊ ಎಂಬಲ್ಲಿ ಈ ಘಟನೆ ನಡೆದಿದೆ.ಪ್ರವಾಸಿಗರು ಮಾರ್ಗಮಧ್ಯೆ ಅಸ್ವಸ್ಥಗೊಂಡಿದ್ದಾರೆ.ಪ್ರವಾಸಿಗರನ್ನು ಸೊರೊ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೊರೊ ಎಂಬಲ್ಲಿ ತಾವೇ ತಯಾರಿಸಿದ್ದ ಅನ್ನ ಮತ್ತು ಸಾಂಬರ್ ಸೇವಿಸಿದ್ದರು. ಬಸ್ ಸೊರೊ ನಗರ ತಲುಪುವಷ್ಟರಲ್ಲಿ 20 ಪ್ರವಾಸಿಗರು ವಾಂತಿ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರವಾಸಿಗರ ಅಸ್ವಸ್ಥತೆಗೆ ಬಿಸಿಗಾಳಿ ಕಾರಣವಿರಬಹುದು ಎಂದು ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *