ಕುರಾನ್ ಪುಸ್ತಕ ಕಳ್ಳತನ ಮಾಡಿ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಅವರನ್ನು ಕರ್ತವ್ಯಲೋಪದ ಆರೋಪದಡಿಯಲ್ಲಿ ಅಮಾನತುಗೊಳಿಸಲಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಶುಕ್ರವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸಿಪಿಐ ಮಂಜುನಾಥ ಹಿರೇಮಠ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ.ಈ ಬಗ್ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾಹಿತಿ ನೀಡಿದ್ದು, ಕುರಾನ್ ಪುಸ್ತಕ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಮಂಜುನಾಥ ಹಿರೇಮಠರನ್ನು ಅಮಾನತು ಮಾಡಲಾಗಿದೆ. ಇವರು ಕರ್ತವ್ಯ ಲೋಪ ಎಸಗಿದ್ದರು ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

