Breaking News

ಕೂದಲು ಕಸಿ ಮಾಡಿಸಿಕೊಂಡ ಇಬ್ಬರು ಇಂಜಿನಿಯರ್‌ ಸಾವು!!

ಉತ್ತರ ಪ್ರದೇಶದ ಇಬ್ಬರು ಯುವಕರು ಕೂದಲಿನ ಕಸಿಗಾಗಿ ಕಾನ್ಪುರರ ಖಾಸಗಿ ಕ್ಲಿನಿಕ್‌ಗೆ ಹೋದರು. ಆದರೆ ಅದು ಅವರ ಜೀವನದ ಕೊನೆಯ ತಪ್ಪು ಎಂದು ಅವರಿಗೆ ತಿಳಿದಿರಲಿಲ್ಲ. ಕೂದಲು ಕಸಿ ಮಾಡಿದ ನಂತರ ನೋವು, ಊತ ಮುಂತಾದ ಸಮಸ್ಯೆಗಳು ಕಾಣಿಸಿಕೊಂಡಿವೆ. ಕೊನೆಗೆ ಅವರು ಉರಿ, ಉರಿ ಎನ್ನುತ್ತಲೇ ಸಾವನ್ನಪ್ಪಿದ್ದಾರೆ. ಈಗ ಎರಡು ಕುಟುಂಬಗಳು ನ್ಯಾಯಕ್ಕಾಗಿ ಬೇಡಿಕೊಳ್ಳುತ್ತಿವೆ.ಬಾಧಿತ ಕುಟುಂಬಗಳು ವೈದ್ಯ ಅನುಷ್ಕಾ ತಿವಾರಿಗೆ ಈ ರೀತಿಯ ಶಸ್ತ್ರಚಿಕಿತ್ಸೆ ಮಾಡಲು ಸೂಕ್ತ ಪರವಾನಗಿ ಅಥವಾ ಅನುಭವವಿಲ್ಲ, ಕ್ಲಿನಿಕ್‌ನಲ್ಲಿ ತುರ್ತು ಸೌಲಭ್ಯಗಳಿಲ್ಲ ಎಂದು ಆರೋಪಿಸಿವೆ.ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *