ಉತ್ತರ ಪ್ರದೇಶದ ಇಬ್ಬರು ಯುವಕರು ಕೂದಲಿನ ಕಸಿಗಾಗಿ ಕಾನ್ಪುರರ ಖಾಸಗಿ ಕ್ಲಿನಿಕ್ಗೆ ಹೋದರು. ಆದರೆ ಅದು ಅವರ ಜೀವನದ ಕೊನೆಯ ತಪ್ಪು ಎಂದು ಅವರಿಗೆ ತಿಳಿದಿರಲಿಲ್ಲ. ಕೂದಲು ಕಸಿ ಮಾಡಿದ ನಂತರ ನೋವು, ಊತ ಮುಂತಾದ ಸಮಸ್ಯೆಗಳು ಕಾಣಿಸಿಕೊಂಡಿವೆ. ಕೊನೆಗೆ ಅವರು ಉರಿ, ಉರಿ ಎನ್ನುತ್ತಲೇ ಸಾವನ್ನಪ್ಪಿದ್ದಾರೆ. ಈಗ ಎರಡು ಕುಟುಂಬಗಳು ನ್ಯಾಯಕ್ಕಾಗಿ ಬೇಡಿಕೊಳ್ಳುತ್ತಿವೆ.ಬಾಧಿತ ಕುಟುಂಬಗಳು ವೈದ್ಯ ಅನುಷ್ಕಾ ತಿವಾರಿಗೆ ಈ ರೀತಿಯ ಶಸ್ತ್ರಚಿಕಿತ್ಸೆ ಮಾಡಲು ಸೂಕ್ತ ಪರವಾನಗಿ ಅಥವಾ ಅನುಭವವಿಲ್ಲ, ಕ್ಲಿನಿಕ್ನಲ್ಲಿ ತುರ್ತು ಸೌಲಭ್ಯಗಳಿಲ್ಲ ಎಂದು ಆರೋಪಿಸಿವೆ.ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

