ಹನಮಗುಡ್ಡ ಹೊಸೂರು ಗ್ರಾಮದಲ್ಲಿ ಹೊಲ ಸಾಗುವಳಿ ಮಾಡುವ ವಿಚಾರವಾಗಿ 2019ರ ಜನವರಿ 1ರಂದು ಅಮರೇಶ ಅವರಿಗೆ ಬಲವಂತವಾಗಿ ಕ್ರಿಮಿನಾಶಕ ಕುಡಿಸಿ ಆರೋಪಿಗಳು ಕೊಲೆ ಮಾಡಿದ್ದರು.ಕೊಲೆ ಮಾಡಿದ 10 ಅಪರಾಧಿಗಳಿಗೆ ಇಲ್ಲಿಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಜೀವಾವಧಿ ಶಿಕ್ಷೆ ವಿಧಿಸಿದೆ.ಗೌಂಡಿ ವಿರುದ್ಧ ಮುದಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಮಸ್ಕಿ ಸಿಪಿಐ ಚನ್ನಯ್ಯ ಹಿರೇಮಠ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ₹37,500 ದಂಡ ವಿಧಿಸಿ ಶುಕ್ರವಾರ ಆದೇಶ ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಆರ್.ಎ ಗಡಕರಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

