ಬ್ಯಾಂಕ್ ಲಾಕರ್ನಲ್ಲಿದ್ದ ಚಿನ್ನಾಭರಣವನ್ನು ಕದ್ದಿದ್ದ ಇಬ್ಬರು ಬ್ಯಾಂಕ್ ನೌಕರರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಸವೇಶ್ವರನಗರದ ಬ್ಯಾಂಕ್ವೊಂದರಲ್ಲಿ ವ್ಯವಸ್ಥಾಪಕರಾಗಿದ್ದ ಸಿರಿಶಾ ಅವರು ₹16 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಅದೇ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದರು. ಜೊತೆಗೆ ಬ್ಯಾಂಕ್ ಚೆಕ್ಬುಕ್, ಪದವಿ ಪ್ರಮಾಣಪತ್ರ, ಅಂಕಪಟ್ಟಿ ಸೇರಿ ಇತರೆ ದಾಖಲೆಗಳನ್ನೂ ಅದೇ ಲಾಕರ್ನಲ್ಲಿ ಇಟ್ಟಿದ್ದರು. ಆರೋಪಿಗಳಿಬ್ಬರು ಸಂಚು ರೂಪಿಸಿ 2024ರ ಡಿಸೆಂಬರ್ನಲ್ಲಿ ಈ ಚಿನ್ನಾಭರಣ ಕಳ್ಳತನ ಮಾಡಿದ್ದರು. ಕಳವು ಮಾಡಿದ ಚಿನ್ನಾಭರಣಗಳನ್ನು ಅಗ್ರಹಾರ ದಾಸರಹಳ್ಳಿಯಲ್ಲಿ ಇರುವ ಜ್ಯುವೆಲರಿ ಅಂಗಡಿಗೆ ಮಾರಾಟ ಮಾಡಿದ್ದರು ಎಂದು ಪೊಲೀಸರು ಹೇಳಿದರು.ಬಂಧಿತರಿಂದ ₹16 ಲಕ್ಷ ಮೌಲ್ಯದ 170 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

