Breaking News

ದಕ್ಷಿಣಕನ್ನಡ: ‘KSRTC’ ಬಸ್ ಲಾರಿ ಮುಖಾಮುಖಿ ಡಿಕ್ಕಿ, ಚಾಲಕರು ಸೇರಿ ನಾಲ್ವರಿಗೆ ಗಂಭೀರ ಗಾಯ!

ದಕ್ಷಿಣಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಹಾಗು ಲಾರಿ ಪರಸ್ಪರ ಡಿಕ್ಕಿಯಾಗಿ ಇಬ್ಬರು ಚಾಲಕರು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಗುಂಡ್ಯದಲ್ಲಿ ನಡೆದಿದೆ.ತಿರುವಿನಲ್ಲಿ ಎದುರುನಿಂದ ವೇಗವಾಗಿ ಲಾರಿ ಬರುತ್ತಿತ್ತು ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ ಕೆಎಸ್‌ಆರ್ಟಿಸಿ ಬಸ್ ಹಾಗು ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಲಾರಿ ಮತ್ತು ಬಸ್ ಚಾಲಕರ ಸ್ಥಿತಿ ಗಂಭೀರವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *