ತುಮಕೂರು ಜಿಲ್ಲೆಯ ಮೂವರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಕರ್ನೂಲ್ ಬಳಿ ನಡೆದಿದೆ.ಕರ್ನೂಲ್ ಬಳಿ ನಿಯಂತ್ರಣ ತಪ್ಪಿದ ಪ್ರವಾಸಿಗರಿದ್ದ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಅನಾಹುತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮೂವರು ಮೃತಪಟ್ಟರೇ, ಉಳಿದ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆಯ ನವೀನ್, ಸಂತೋಷ್, ಲೋಕೇಶ್ ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

