Breaking News

ನರೇಗಲ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್, ವಿದ್ಯಾರ್ಥಿ ಆತ್ಮಹತ್ಯೆ!

ಇತ್ತೀಚೆಗೆ ಪ್ರಕಟವಾದ ಎಸ್‌ಎಸ್‌ಎಲ್‌‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣ ಆದ ಕಾರಣಕ್ಕೆ ಪಟ್ಟಣದ ಅನ್ನದಾನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.ಫಲಿತಾಂಶ ಪ್ರಕಟವಾದ ದಿನದಿಂದ ಮನಸ್ಸಿಗೆ ತೆಗೆದುಕೊಂಡಿದ್ದ ವಿದ್ಯಾರ್ಥಿಯು ಅದನ್ನೇ ಹೆಚ್ಚಾಗಿ ವಿಚಾರ ಮಾಡುತ್ತಿದ್ದ. ಇದೇ ವಿಷಯಕ್ಕೆ ಮನನೊಂದು ನರೇಗಲ್ ಬಸ್ ನಿಲ್ದಾಣದ ಎದುರಿಗೆ ಇರುವ ಸರ್ಕಾರಿ ಶಾಲೆಯ ಆವರಣದಲ್ಲಿನ ಗಿಡಕ್ಕೆ ನೇಣು ಬಿಗಿದುಕೊಂಡಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ರಾಕೇಶ್ ಉತ್ತಮ ಕಬಡ್ಡಿ ಆಟಗಾರನಾಗಿದ್ದು ಮುಕ್ತ ಹಾಗೂ ಕೆಜಿ ಕಬಡ್ಡಿ ಪಂದ್ಯಾವಳಿಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಎಲ್ಲೆಡೆ ಹೆಸರು ಮಾಡಿದ್ದ. ಉತ್ತಮ ಆಟಗಾರ ಓದಿನ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ನೋವಾಗಿದೆ ಎಂದು ಅವನ ಸಹ‌ಪಾಠಿಗಳು ತಿಳಿಸಿದರು.ಮೃತ ವಿದ್ಯಾರ್ಥಿಯ ತಂದೆ ಮನೆ ಹಾಗೂ ಕಟ್ಟಡಗಳನ್ನು ಕಟ್ಟುವ ಕೆಲಸ ಮಾಡುತ್ತಾರೆ. ಅವರಿಗೆ ಇಬ್ಬರು ಗಂಡುಮಕ್ಕಳಿದ್ದು ರಾಕೇಶ್ ಕಿರಿಯ ಮಗನಾಗಿದ್ದಾನೆ. ಈ ಕುರಿತು ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *