Breaking News

ಮೂಡಿಗೆರೆ: ಕರಡಿ ದಾಳಿ, ಇಬ್ಬರಿಗೆ ಗಂಭೀರ ಗಾಯ!

ವಿನಯ್ ಅವರು, ಗಿಡ್ಡಯ್ಯ ಅವರೊಂದಿಗೆ ತಮ್ಮ ತೋಟದಲ್ಲಿ ಗೊಬ್ಬರ ಹಾಕುತ್ತಿದ್ದ ವೇಳೆ, ಎರಡು ಕರಡಿಗಳು ಏಕಕಾಲದಲ್ಲಿ ದಾಳಿ ನಡೆಸಿವೆ.‌ ದಾಳಿಯಿಂದ ಇಬ್ಬರಿಗೂ ತಲೆ, ಬೆನ್ನು ಮತ್ತು ಕೈಕಾಲುಗಳಲ್ಲಿ ಗಂಭೀರ ಗಾಯಗಳಾಗಿವೆ.ಇವರಿಬ್ಬರ ಕಿರುಚಾಟ ಕೇಳಿ ಅಕ್ಕಪಕ್ಕದ ತೋಟದವರು ಬಂದು ಕಿರುಚಾಡಿದ ಬಳಿಕ ಕರಡಿಗಳು ಕಾಫಿ ತೋಟದೊಳಗೆ ಕಣ್ಮರೆಯಾಗಿವೆ. ಮಳೆಯಾಗುತ್ತಿದ್ದರಿಂದ ಮಂಜು ಮುಸುಕಿದ ವಾತಾವರಣವಿದ್ದು, ಕರಡಿಗಳು ಸಮೀಪಕ್ಕೆ ಬರುವವರೆಗೂ ಕಾಣಿಸಿಕೊಳ್ಳದೆ ಇದ್ದುದರಿಂದ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣವೇ ಎಂಜಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *