ಮದುವೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಮಂಗಳೂರಿನ ಹೊರವಲಯದ ವಳಚ್ಚಿಲ್ನಲ್ಲಿ ಗುರುವಾರ ನಡೆದಿದೆ. ಸುಲೇಮಾನ್ ತಮ್ಮ ಇಬ್ಬರು ಪುತ್ರರಾದ ರಿಯಾಬ್ ಮತ್ತು ಶಿಯಾಬ್ ಜೊತೆ ಗುರುವಾರ ರಾತ್ರಿ ಮುಸ್ತಾಫಾ ಮನೆಗೆ ತೆರಳಿದ್ದರು. ಮಾತುಕತೆ ಫಲಪ್ರದವಾಗದೆ, ಮುಸ್ತಾಫಾ ಅವರನ್ನು ಮನೆಯಿಂದ ಹೊರಡುವಂತೆ ಹೇಳಿದ್ದಾನೆ. ಬಳಿಕ ಏಕಾಏಕಿ ಸಿಟ್ಟಾದ ಮುಸ್ತಾಫಾ ಮನೆಯಲ್ಲಿದ್ದ ಚೂರಿಯನ್ನು ತೆಗೆದುಕೊಂಡು ಸುಲೇಮಾನ್ ಅವರ ಕುತ್ತಿಗೆಗೆ ಇರಿದಿದ್ದಾನೆ. ಗಾಯಗೊಂಡ ಸುಲೇಮಾನ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.ಶಿಯಾಬ್ ಮತ್ತು ರಿಯಾಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

