Breaking News

ಹೊಸದಿಲ್ಲಿ :ಬಸ್ ಚಲಾಯಿಸುತ್ತಿದ್ದಾಗ ಚಾಲಕನಿಗೆ ಹೃದಯಾಘಾತ!!

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಬಸ್ ಚಲಾಯಿಸುತ್ತಿದ್ದಾಗ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ವೇಳೆ ನಿರ್ವಾಹಕ ಬಸ್‌ ನಿಲ್ಲಿಸಿ ಸಂಭಾವ್ಯ ಅಪಘಾತವನ್ನು ತಪ್ಪಿಸಿದ್ದಾರೆ.ಬಸ್ ಕನಕಂಪಟ್ಟಿ ದಾಟುತ್ತಿದ್ದಂತೆ ಚಾಲಕ ಪ್ರಭು ಕಂಡಕ್ಟರ್‌ಗೆ ಕರೆ ಮಾಡಿ ನನಗೆ ಜೋರಾಗಿ ಎದೆ ನೋಯುತ್ತಿದೆ ಎಂದು ಹೇಳಲು ಪ್ರಯತ್ನಿಸಿದರು. ಆದರೆ ಕಂಡೆಕ್ಟರ್ ಪ್ರತಿಕ್ರಿಯಿಸುವ ಮೊದಲೇ ಪ್ರಭು ಕುಸಿದು ಬಿದ್ದರು. ಹೃದಯಾಘಾತವಾಗಿ ಕುಸಿದು ಬಿದ್ದ ಚಾಲಕನಿಗೆ ಕಂಡಕ್ಟರ್ ಮತ್ತು ಪ್ರಯಾಣಿಕರು ಸಹಾಯಕ್ಕೆ ಧಾವಿಸುವುದು. ಕಂಡೆಕ್ಟರ್ ಬ್ರೇಕ್ ಹಿಡಿದು ಬಸ್‌ ಅನ್ನು ನಿಯಂತ್ರಣಕ್ಕೆ ತರುವುದು ಕಂಡು ಬಂದಿದೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *