ಸೋದರ ಮಾವನ ಮಗಳು ತನ್ನನ್ನು ವಿವಾಹವಾಗಲು ನಿರಾಕರಸಿದಳು ಎಂಬ ಕಾರಣಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಜ್ಜವಾರ ಗ್ರಮದಲ್ಲಿ ನಡೆದಿದೆ.ನಿನ್ನೆ ಆಕೆಯ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮನೆಗೆ ಹೋಗಿ ಶುಭಕೋರಿ ಬಂದಿದ್ದ. ಈ ವೇಳೆ ಆಕೆಯನ್ನು ಮದುವೆಯಾಗುವುದಾಗಿ ಕೇಳಿದ್ದ. ಅದಕ್ಕೆ ಯುವತಿ ಹಾಗೂ ಆಕೆಯ ತಂದೆ-ತಾಯಿ ನಿರಾಕರಿಸಿದ್ದಾರೆ.ಬೇಸರದಿಂದ ಮನೆಗೆ ಬಂದವವನು ಬೆಳಗಾಗುವಷ್ಟರಲ್ಲಿ ನೇಣಿಗೆ ಕೊರಳೊಡ್ಡಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

