Breaking News

ಆಟೋ ಮೇಲೆ ಮರ ಬಿದ್ದು ಚಾಲಕ ಮೃತ್ಯು!

ಕೊಪ್ಪ ತಾಲೂಕು ಜಯಪುರ ಸಮೀಪದ ಕೊಗ್ರೆಯ ಜಾಳ್ಮಾರದಲ್ಲಿ ಆಟೋ ಮೇಲೆ ಮರ ಬಿದ್ದು, ಚಾಲಕ ರತ್ನಾಕರ (38) ಮೃತಪಟ್ಟಿದ್ದಾರೆ.ಚಿಕ್ಕಮಗಳೂರು ತಾಲೂಕು ಸುತ್ತಮುತ್ತ ಮಳೆಯ ಅಬ್ಬರ ಜೋರಾಗಿದ್ದು, ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು, ನಗರದ ಕೆಲವು ಭಾಗ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.ಮಲೆನಾಡು ಮತ್ತು ಬಯಲುಸೀಮೆ ಭಾಗದಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು, ಕಾರ್ಮಿಕರು, ಮಾಲೀಕರು ಮನೆಯಲ್ಲೇ ಉಳಿದುಕೊಳ್ಳುವಂತಾಗಿದೆ. ನದಿಗಳ ನೀರಿನ ಮಟ್ಟ ಹಳ್ಳಕೊಳ್ಳ, ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಒಟ್ಟಾರೆ ಭಾರೀ ಮಳೆಯಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *