ಅಬ್ದುಲ್ ರೆಹಮಾನ್ ಬಳಿ ತೆರಳಿದ್ದ ಹನುಮಂತ ಹಣ ನೀಡುವಂತೆ ಕೇಳಿದ್ದ. ತನ್ನ ಹಣ್ಣಿನ ಅಂಗಡಿ ಪಕ್ಕದಲ್ಲಿಯೇ ಮಲಗಿದ್ದ ಅಬ್ದುಲ್ ಅವರು ಇದರಿಂದ ಕೋಪಗೊಂಡು ಬೈಯ್ದಿದ್ದರು. ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ವಿಕೋಪಕ್ಕೆ ತೆರಳಿದೆ. ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಬಳಿಕ ಅಲ್ಲಿಯೇ ಇದ್ದ ಕಟ್ಟಿಗೆ ತೆಗೆದುಕೊಂಡು ಅಬ್ದುಲ್ ರೆಹಮಾನ್ ಅವರಿಗೆ ಹನುಮಂತನು ಬಲವಾಗಿ ಹೊಡೆದಿದ್ದಾನೆ. ಬಳಿಕ ಅಬ್ದುಲ್ ರೆಹಮಾನ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ನಿವಾಸಿ ಹನುಮಂತಪ್ಪ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

