Breaking News

ಹಾಸನ :ದಾರಿ ಕಾಣದೆ ಕಾರು ಪಲ್ಟಿಯಾಗಿ ಇಬ್ಬರು ಸಾವು!

ಹಾಸನ ತಾಲೂಕಿನ ಬಾಗೇ ಸಮೀಪ ಅರಸು ನಗರದಲ್ಲಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ.ಬೆಂಗಳೂರಿನ ದಾಸರಹಳ್ಳಿ ಮೂಲದ ಶರತ್, ಅಭಿಷೇಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಂಗಳೂರು ಮೂಲದ ಟ್ರಾವೆಲ್ಸ್ ಒಂದರ ಮೂಲಕ ಬಾಡಿಗೆ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭಾರಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *