Breaking News

ಜಗಳ ಬಿಡಿಸಲು ಹೋದ ವ್ಯಕ್ತಿಗೆ ಬಿಯರ್​ ಬಾಟಲಿಯಿಂದ ಹತ್ಯೆ!!

ನಲ್ಲಿ ಇಬ್ಬರು ನಡುವೆ ಗಲಾಟೆ ನಡೆಯುತ್ತಿದ್ದ ವೇಳೆ ಜಗಳ ಬಿಡಿಸಲು ಹೋದ ಮೂರನೇ ವ್ಯಕ್ತಿಗೆ ಬಿಯರ್​ ಬಾಟಲಿಯಿಂದ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಘಟನೆ ಹೈದರಾಬಾದ್​ನ ಉಪ್ಪಳ ಪ್ರದೇಶದ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.ಭಾಸ್ಕರ್ ಪುತ್ರ ಪವನ್​(26)ಮೃತ ಯುವಕ. ಮೃತನ ತಂದೆ ಭಾಸ್ಕರ್​ ನಗರ ಅಂಬರ್‌ಪೇಟೆಯಲ್ಲಿ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಬಾರ್​​ ಮ್ಯಾನೇಜರ್ ವಿರುದ್ಧ ಹಾಗೂ ತನ್ನ ಮಗನನ್ನು ಕೊಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಂದೆ ಭಾಸ್ಕರ್​ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *