ಒಡಿಶಾದಲ್ಲಿ ಇಂದು ವಿಚಕ್ಷಣ ದಳದ ಅಧಿಕಾರಿಗಳು ದಾಳಿ ಮಾಡಿದ್ದು, ದೊಡ್ಡ ತಿಮಿಂಗಿಲವನ್ನೇ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದೆ. ಸರ್ಕಾರಿ ನೌಕರನ ಭುವನೇಶ್ವರದ ಫ್ಲಾಟ್ನಲ್ಲಿ ಒಂದು ಕೋಟಿ ರೂಪಾಯಿ ನಗದು ಜಪ್ತಿಯಾಗಿದ್ರೆ, ಅಂಗೂಲ್ ಎಂಬಲ್ಲಿನ ಮನೆಯಲ್ಲಿ 1 ಕೋಟಿ 10 ಲಕ್ಷ ನಗದು ಸಿಕ್ಕಿದೆ.ತಕ್ಷಣವೇ ಸಾಹೇಬ್ರು ಕೋಟ್ಯಾಂತರ ರೂಪಾಯಿ ನೋಟಿನ ಕಂತೆಯನ್ನು ಕಿಟಕಿ ಮೂಲಕ ಹೊರಗೆ ಎಸೆದಿದ್ದಾರೆ.ಚೀಫ್ ಇಂಜಿನಿಯರ್ ಪ್ಲ್ಯಾಟ್ನ ಕಿಟಕಿಯಿಂದ ಹೊರಗೆ ಎಸೆದ ಹಣವನ್ನು ಅಧಿಕಾರಿಗಳು ಕೂಡಲೇ ವಶಪಡಿಸಿಕೊಂಡಿದ್ದಾರೆ. ಈಗ ಸುಮಾರು 2 ಕೋಟಿ ರೂಪಾಯಿ ನಗದು ಸೇರಿದಂತೆ ಪ್ಲ್ಯಾಟ್ ಮತ್ತು ಮನೆಯಲ್ಲಿ ಸಿಕ್ಕ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

