ಶಂಕರ್ ಹಾಗೂ ಸುರೇಶ್ ಅವರು ಐಪಿಎಲ್ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದರು. ₹1,200 ಮೌಲ್ಯದ ಟಿಕೆಟ್ ಅನ್ನು ₹ 5,000ಕ್ಕೆ ಮಾರಾಟ ಮಾಡಲಾಗುತ್ತಿತ್ತು. ಟಿಕೆಟ್ ಖರೀದಿಸುವ ನೆಪದಲ್ಲಿ ಕಾರ್ಯಾಚರಣೆ ನಡೆಸಿದ್ದ ಗೋವಿಂದರಾಜ ನಗರ ಠಾಣೆಯ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು. ಆರೋಪಿಗಳ ವಿಚಾರಣೆ ನಡೆಸಿದಾಗ ಪೊಲೀಸ್ ಸಿಬ್ಬಂದಿಯ ಕೈವಾಡ ಇರುವುದು ಪತ್ತೆಯಾಗಿತ್ತು.ಆರೋಪಿಗಳಿಗೆ ಕಾಳಸಂತೆಯಲ್ಲಿ ಮಾರಾಟ ಮಾಡಲು ಟಿಕೆಟ್ ನೀಡಿದ್ದ ಆರೋಪದ ಮೇರೆಗೆ ವೆಂಕಟಗಿರಿಗೌಡ ಮತ್ತು ರವಿಚಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ತನಿಖೆಯ ವೇಳೆ ಲಭಿಸಿದ ಮಾಹಿತಿ ಆಧರಿಸಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಇಬ್ಬರನ್ನೂ ಅಮಾನತು ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

