ಸಾರ್ವಜನಿಕ ನಳ್ಳಿಯ ಬಳಿ ನೀರು ತರಲು ಹೋಗಿದ್ದ ವೇಳೆ ಹಾವು ಕಚ್ಚಿದೆ. ಇದರಿಂದ ಅಸ್ವಸ್ಥಗೊಂಡ ಬಾಲಕಿಯನ್ನು ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ಕರೆ ತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ತಡರಾತ್ರಿ ಮೃತದೇಹವನ್ನು ಹನೂರಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

