ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರ ಸೂಚನೆಯಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ರಾತ್ರಿ ವೇಳೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾರಂಭಿಸಿದ್ದರು.ಮಧ್ಯರಾತ್ರಿ ವೇಳೆ ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಪ್ರಮುಖರು ಕಡಬ ಪೊಲೀಸ್ ಠಾಣೆ ಎದುರು ಹಾಜರಾಗಿದ್ದಾರೆ. ಪೊಲೀಸರ ಈ ನಡೆ ವಿರೋಧಿಸಿ ಠಾಣೆ ಎದುರು ಹಾಜರಾಗಿದ್ದಕ್ಕೆ ಎಫ್ಐಆರ್ ದಾಖಲಿಸಲಾಗಿದೆ.ಯಾವುದೇ ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿರುತ್ತಾರೆ ಅಂತ ದೂರಿನಲ್ಲಿ ಉಲ್ಲೇಖಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

