Breaking News

ಉಳ್ಳಾಲ :ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋದ ಮನೆ!

ಮನೆಯವರು ಮೆಹಂದಿಗೆ ತೆರಳಿದ್ದ ವೇಳೆ ಆಕಸ್ಮಿಕ ಬೆಂಕಿಗೆ ಹಂಚಿನ ಮನೆ ಸುಟ್ಟುಹೋದ ಘಟನೆ ತಡರಾತ್ರಿ ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಗಂಬಿಲ ವೈದ್ಯನಾಥನಗರದಲ್ಲಿ ನಡೆದಿದೆ.ಸ್ಥಳೀಯರು ಸೇರಿ ಮನೆಯೊಳಗೆ ಇದ್ದ ಗ್ಯಾಸ್ ಸಿಲಿಂಡರನ್ನು ಹೊರಗೆ ಎಸೆದಿದ್ದಾರೆ. ನಂತರ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಬಳಿಕ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು. ಅದಾಗಲೇ ಮನೆಯೊಳಗೆ ಇದ್ದ ಗ್ರೇಂಡರ್, ಪ್ರಿಡ್ಜ್, ಟಿ.ವಿ, ಫ್ಯಾನ್, ಬಟ್ಟೆ, ಕಪಾಟು ಸುಟ್ಟುಕರಕಲಾಗಿದ್ದವು. ಇಡೀ ಕುಟುಂಬ ಮೊದಲೇ ಆರ್ಥಿಕ ಸಂಕಷ್ಟದಲ್ಲಿದ್ದು, ಇದರೊಂದಿಗೆ ಮನೆ ಸುಟ್ಟು ಕರಕಲಾಗಿದ್ದು. ಮನೆಯವರನ್ನು ಬೀದಿ ಪಾಲಾಗಿಸಿದೆ

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *